Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

ವಸ್ತç ಚಿತ್ರಕಲಾ ಉದ್ಯಮಿ (ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್) ತರಬೇತಿ ಸಮಾರೋಪ ಸಮಾರಂಭ

ಚಿತ್ರದುರ್ಗ : ರುಡ್‌ಸೆಟ್ ಸಂಸ್ಥೆಯು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯಮಶೀಲತಾಭಿವೃದ್ಧಿ – ವಸ್ತç ಚಿತ್ರಕಲಾ ಉದ್ಯಮಿ (ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್) ತರಬೇತಿ ಕಾರ್ಯಕ್ರಮವನ್ನು ದಿನಾಂಕ: ೧೮.೦೫.೨೦೨೩ ರಿಂದ ೧೬.೦೬.೨೦೨೩ ರವರೆಗೆ ೩೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ದಿನಾಂಕ:೧೬.೦೬.೨೦೨೩ರAದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಟಿ.ಆರ್. ಶಶಿಕಲಾ, ಸಹಾಯಕ ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ, ಚಿತ್ರದುರ್ಗ ಇವರು ಭಾಗವಹಿಸಿದ್ದರು.

ಇವರು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು ಹಾಗೂ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಮನಸ್ಸಿದರೆ ಮಾರ್ಗ ಎನ್ನುವಂತೆ ಯಾವುದೇ ಕೆಲಸವನ್ನು ಮಾಡಬೇಕಾದರೆ ಮಾಡುವ ಇಚ್ಛೆ ಆಸಕ್ತಿಯೊಂದಿಗೆ ಧನಾತ್ಮಕ ಆಲೋಚನೆಗಳು ಇದ್ದರೆ ಮಾತ್ರ ಉದ್ಯೋಗದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಎಂಬ್ರಾಯಿಡರಿ ಮತ್ತು ಪೆಬ್ರಿಕ್ ಪೇಟಿಂಗ್ ಮಾಡುವುದು ಉತ್ತಮ ಆದಾಯತರುವಂತಹ ಬೇಡಿಕೆಯುತ ಉದ್ಯಮವಾಗಿದೆ. ಈ ಉದ್ಯಮದಲ್ಲಿ ಸಮಯಪಾಲನೆ ಮತ್ತು ಬದ್ಧತೆಯೊಂದಿಗೆ ಕೆಲಸ ಅತ್ಯಂತ ಅವಶ್ಯಕವಾಗಿದೆ. ಆಧುನಿಕ ಜೀವನ ಶೈಲಿಗನುಗುಣವಾಗಿ ನಿಮ್ಮ ಉದ್ಯಮದಲ್ಲಿ ಹೊಸಹೊಸ ವಿನ್ಯಾಸಗಳನ್ನು ಅಳವಡಿಸಿಕೊಳ್ಳುತ್ತಾಸಾಗಬೇಕು, ಹೊಸದು ನಿರಂತರ ಪ್ರಕ್ರಿಯೆ ಯಾದಾಗ ನೂತನ ಬದಲಾವಣೆಗೆ ನಾಂದಿಯಾಗುತ್ತದೆ, ಅಂದರೆ ಮಾತ್ರ ತಾಂತ್ರಿಕವಾಗಿ ಬದಲಾಗುತ್ತಿರುವ ಉದ್ಯಮದಲ್ಲಿ ಮುಂದುವರಿಯಲು ಸಾದ್ಯವಾಗುತ್ತದೆ. ಒಂದಿಷ್ಟು ನಗು, ಸಹನೆ ಮತ್ತು ಹೊಂದಾಣಿಕೆಯಿAದ ವೃತ್ತಿ ಬದುಕನ್ನು ಸಧೃಡವಾಗಿ ಕಟ್ಟಿಕೊಳ್ಳಿರಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಸಕಾರಾತ್ಮಕ ಮನೋಭಾವದೊಂದಿಗಿನ ಕೆಲಸ ಮತ್ತು ನಗು ಮುಖದ ಸೇವೆ ಇವು ಯಶಸ್ವಿ ಉದ್ಯೋಗಿಗಳ ಗುಟ್ಟು ಎಂದು ತಿಳಿಸುತ್ತಾ ಮಾಡುವ ವೃತ್ತಿಯನ್ನು ಪ್ರೀತಿಯಿಂದ ಹಾಗೂ ಶ್ರದ್ಧೆಯಿಂದ ಮಾಡಿ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಶ್ರೀಮತಿ ಶೋಭಾ, ಚಿತ್ರದುರ್ಗ ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಂದಿರುವ ಅತಿಥಿಗಳನ್ನು ಮತ್ತು ಎಲ್ಲರನ್ನೂ ಸ್ವಾಗತಿಸಿ ಮಾತನಾಡಿದ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ರಾಧಮ್ಮ ಎಚ್.ಆರ್ ಯವರು ತರಬೇತಿಯ ಅವಧಿಯಲ್ಲಿ ಕಲಿಸಲಾಗಿರುವ ಮೃದು ಕೌಶಲ್ಯಗಳು ಉದ್ಯಮಶೀಲತ ಗುಣಗಳು, ಸಂವಹನ ಕಲೆ, ಸಮಯಪಾಲನೆ, ಮಾರುಕಟ್ಟೆಯ ವಿಷಯಗಳ ಕುರಿತಂತೆ ತಿಳಿದುಕೊಂಡಿರುವ ಅಂಶಗಳನ್ನು ಉದ್ಯೋಗದ ಜೊತೆಗೆ ಜೀವನದಲ್ಲಿ ಅಳವಡಿಸಿಕೊಳ್ಳಿರಿ ಎಂದು ಸಲಹೆ ನೀಡಿದರು. ತರಬೇತಿಯ ನಂತರವು ಸಂಸ್ಥೆಯಿAದ ನಿಮ್ಮನ್ನು ಎರಡು ವರ್ಷಗಳ ಕಾಲ ಅವಲೋಕನ ಮಾಡಲಾಗುತ್ತದೆ, ನಿಮ್ಮ ಉದ್ಯೋಗದ ಆಗುಹೋಗುಗಳ ಬಗ್ಗೆ ವಿಚಾರಿಸುತ್ತಾ ಉದ್ಯಮ ಕಟ್ಟುವ ಪ್ರಕ್ರಿಯೆಯಲ್ಲಿ ಸಂಸ್ಥೆ ನಿಮ್ಮೊಂದಿಗಿರುತ್ತದೆ ಎಂದು ಭರವಸೆ ನೀಡಿದರು.
ಸಂಸ್ಥೆಯ ಉಪನ್ಯಾಸಕರಾದ ಶ್ರೀ ತೋಟಪ್ಪ ಎಸ್. ಗಾಣಿಗೇರ ರವರು ಕಾರ್ಯಕ್ರಮ ನಿರೂಪಿಸಿದರು ಮತ್ತು ಕೊನೆಯಲ್ಲಿ ಶ್ರೀ ಉದಯಕುಮಾರ, ಹಿರಿಯ ಉಪನ್ಯಾಸಕರು ಇವರು ವಂದನಾರ್ಪಣೆ ಮಾಡಿದರು.

ಒಟ್ಟು ಕಾರ್ಯಕ್ರಮದಲ್ಲಿ ೩೫ ಜನ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.