Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

ಜ್ಯೂಟ್ ಉತ್ಪನ್ನ ಉದ್ಯಮಿ ಸಮಾರೋಪ ಸಮಾರಂಭ ಕಾರ್ಯಕ್ರಮ

“ಮಹಿಳೆಯರ ಸ್ವಾವ¯ಂಬನೆಯೆ ಮಹಿಳಾ ಸಬಲೀಕರಣ”
ಚಿತ್ರದುರ್ಗ: ರುಡ್‌ಸೆಟ್ ಸಂಸ್ಥೆಯು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ.ಚಿತ್ರದುರ್ಗ ಇವರ ಸಹಯೋಗ ಮತ್ತು ಜಿಲ್ಲಾ ಪಂಚಾಯತ ಎನ್‌ಆರ್‌ಎಲ್‌ಎಮ್ ವಿಭಾಗ, ಚಿತ್ರದುರ್ಗ. ಇವರ ತರಬೇತಿ ಪ್ರಾಯೋಜಿಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ (ಇ.ಡಿ.ಪಿ.)ಯಲ್ಲಿ ಜ್ಯೂಟ್ ಉತ್ಪನ್ನ ಉದ್ಯಮಿ ಕಾರ್ಯಕ್ರಮವನ್ನು ದಿನಾಂಕ: 05.07.2023 ರಿಂದ 17.07.2023 ರವರೆಗೆ 13 ದಿನಗಳ ಕಾಲ ಆಯೋಜಿಸಲಾಗಿದ್ದು, ಈ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ದಿ:18.07.2023 ರ ಮುಂಜಾನೆ ಚಿಕ್ಕಗೊಂಡನಹಳ್ಳಿಯ ಶ್ರೀ ವರವೀರ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿತ್ತು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಗೀತಾ ಬಿ, ಪ್ರಾದೇಶಿಕ ನಿರ್ದೇಶಕರು, ಪ್ರಾದೇಶಿಕ ಕಛೇರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಚಿತ್ರದುರ್ಗ,ಇವರು ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ, ಮಾತನಾಡುತ್ತಾ ಮಹಿಳೆಯರು ಕೇವಲ ಕುಟುಂಬಕ್ಕೆ ಸೀಮಿತವಾಗಿರದೆ ಕೌಶಲ್ಯಾಭಿವೃದ್ಧಿಗೊಳಿಸಿಕೊಳ್ಳಲು ಯತ್ನಿಸಬೇಕು. ತಮ್ಮ ಕೌಶಲ್ಯಗಳನ್ನು ಉಪಯೋಗಿಸಿ, ಸ್ವಉದ್ಯೋಗವನ್ನು ಮಾಡಿ ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಲು ಗಮನ ಹರಿಸಬೇಕು. ಯಾರೊಬ್ಬರ ಮೇಲೂ ಅವಲಂಬಿಗಳಾಗದೆ, ಮಹಿಳೆಯರು ಸ್ವಾವಲಂಬಿಗಳಾಗಬೇಕು. ಪ್ರತಿ ಯಶಸ್ವಿ ವ್ಯಕ್ತಿಯ ಹಿಂದೆ ಒಬ್ಬ ಹೆಣ್ಣು ಇರುತ್ತಾಳೆ ಎನ್ನುವುದು ರೂಢಿಮಾತು, ಆದರೆ ಒಬ್ಬ ಯಶಸ್ವಿ ಮಹಿಳೆಯಾಗಲು ಮನೆಯ ಎಲ್ಲರ ಸಹಕಾರ ಬೇಕು. ಈ ಜ್ಯೂಟ್ ಬ್ಯಾಗ್ ಉದ್ಯೋಗ ಒಂದು ಸಾರ್ವತ್ರಿಕ ಉದ್ಯಮ, ಮನೆಯಲ್ಲಿ ಒಂದು ಚಿಕ್ಕದಾಗಿ ಉದ್ಯಮವನ್ನು ಆರಂಭ ಮಾಡಿದರೂ ಮನೆಯನ್ನು ನಡೆಸುವಷ್ಟು ಆದಾಯ ಗಳಿಸಬಹುದು. ನೀವು ಹೇಗೆ ತರಬೇತಿ ಪಡೆದ್ದೀರೋ ಹಾಗೆಯೇ ನಿಮ್ಮ ಸುತ್ತಮುತ್ತ ಇರುವ ಮಹಿಳೆಯರಿಗೂ ಈ ಅವಕಾಶ ಪಡೆದುಕೊಳ್ಳಲು ಮಾಹಿತಿ ನೀಡಿ. ಇದರಿಂದ ಪ್ರತಿ ಆಸಕ್ತಿ ಮಹಿಳೆ ಕೂಡ ತರಬೇತಿ ಪಡೆದು ಸ್ವಾವಲಂಬಿಯಾಗಲು ಅವಕಾಶ ಸಿಗುತ್ತದೆ. ಇದರಿಂದ ದೇಶದಲ್ಲಿ ಮಹಿಳಾ ಸಬಲೀಕರಣವನ್ನು ಸಾಧಿಸಬಹುದು. ಎಂದು ಶಿಬಿರಾರ್ಥಿಗಳಿಗೆ ಸಂದೇಶ ನೀಡಿದರು.
ಇನ್ನೋರ್ವ ಅತಿಥಿಗಳಾದ ಶ್ರೀಯುತ ತಿಪ್ಪೇಸ್ವಾಮಿ, ಆರ್ಥಿಕ ಸಾಕ್ಷರತಾ ಸಮಾಲೋಚಕರು, ಅಮೂಲ್ಯ ಸಾಕ್ಷರತಾ ಕೇಂದ್ರ ಚಿತ್ರದುರ್ಗ,ಇವರು ಶಿಬಿರಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ಪ್ರತಿಯೊಬ್ಬರು ಬ್ಯಾಂಕ್‌ನ ಖಾತೆ ತೆರೆಯಬೇಕು, ಉಳಿತಾಯ ಮಾಡಬೇಕು ಹಾಗೂ ಬ್ಯಾಂಕಿನಿAದ ಹಾಗೂ ಇತರ ಸರ್ಕಾರಿ ಇಲಾಖೆಯಿಂದ ದೊರೆಯುವ ಸೌಲಭ್ಯ ಪಡೆದುಕೊಂಡು ಜೀವನದಲ್ಲಿ ಏಳಿಗೆಯನ್ನು ಹೊಂದಲು ತಿಳಿಸಿದರು.
ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ರಾಧಮ್ಮ ಹೆಚ್.ಆರ್. ರವರು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಶಿಬಿರಾರ್ಥಿಗಳಿಗೆ ನೀವು ಪಡೆದ ತರಬೇತಿಯನ್ನು ಸದುಪಯೋಗ ಪಡೆಸಿಕೊಂಡು ಸ್ವ ಉದ್ಯೋಗಿಗಳಾಗಿ ಹಾಗೂ ಉತ್ತಮ ಜೀವನ ನಡೆಸುವಂತೆ ಶುಭ ಹಾರೈಸಿದರು. ನಿಮ್ಮ ಗ್ರಾಮದಲ್ಲಿರುವ ಇತರ ನಿರುದ್ಯೋಗಿ ಯುವಕ ಯುವತಿಯರಿಗೆ ಸಂಸ್ಥೆಯ ಬಗ್ಗೆ ತಿಳಿಸಿ ಹಾಗೂ ಅವರಿಗೂ ತರಬೆತಿ ಪಡೆದು ಸ್ವ ಉದ್ಯೋಗ ಮಾಡುವ ಅವಕಾಶ ಕಲ್ಪಸಲು ಪ್ರಯತ್ನಿಸಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶ್ರೀಯತ ಅಶೋಕ, ಯೋಜನಾ ಅಧಿಕಾರಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ,ಚಿತ್ರದುರ್ಗ ಶ್ರೀಯುತ ಮಲ್ಲಿಕಾರ್ಜುನ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಚಿಕ್ಕಗೊಂಡನಹಳ್ಳಿ, ಶ್ರೀಮತಿ ನಾಗವೇಣಿ ಒಕ್ಕೂಟದ ಅಧ್ಯಕ್ಷರು, ಚಿಕ್ಕಗೊಂಡನಹಳ್ಳಿ ಮತ್ತು ಇವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಸುಧಾ ಕೆ.ಬಿ., ಸಮನ್ವಯ ಅಧಿಕಾರಿಗಳು, ಜ್ಞಾನವಿಕಾಸ ಕೇಂದ್ರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ,ಚಿತ್ರದುರ್ಗ ಇವರು ನಿರೂಪಿಸಿದರು, ಶ್ರೀಯುತ ಮಧು, ವಲಯ ಮೇಲ್ವಿಚಾರಕರು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ,ಚಿತ್ರದುರ್ಗ. ರವರು ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ಮತ್ತು ಕೊನೆಯಲ್ಲಿ ಸಂಸ್ಥೆಯ ಉಪನ್ಯಾಸಕರಾದ ಶ್ರೀ ತೋಟಪ್ಪ ಎಸ್. ಗಾಣಿಗೇರ್, ವಂದನಾರ್ಪಣೆ ಮಾಡಿದರು.
ಒಟ್ಟು ಕಾರ್ಯಕ್ರಮದಲ್ಲಿ ಸಂಸ್ಥೆಯ ಸಿಬ್ಬಂದಿಗಳು, 34 ಜನ ಶಿಬಿರಾರ್ಥಿಗಳು ಮತ್ತು ಸಂಘದ ಸದಸ್ಯರು ಪಾಲ್ಗೊಂಡಿದ್ದರು.