Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

Inauguration of Sheep and Goat Rearing Training Program

ಮೈಸೂರು : ರುಡ್‌ಸೆಟ್ ಸಂಸ್ಥೆ, ಮೈಸೂರಿನಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್, ಮೈಸೂರು ಇವರ ಪ್ರಾಯೋಜಕತ್ವದಲ್ಲಿ ೧೦ ದಿನಗಳ ಕಾಲಾವಧಿಯ ಉದ್ಯಮಶೀಲತಾಭಿವೃದ್ಧಿಯಲ್ಲಿ – ಆಡು ಮತ್ತು ಕುರಿ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ದಿನಾಂಕ: ೧೯.೦೭.೨೦೨೩ ರಿಂದ ೨೮.೦೭.೨೦೨೩ ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಈ ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭವನ್ನು ದಿನಾಂಕ:೧೯.೦೭.೨೦೨೩ ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಶಂಕರ ನಾರಾಯಣ, ಪ್ರಾದೇಶಿಕ ಪ್ರಬಂಧಕರು, ಕರ್ನಾಟಕ ಗ್ರಾಮೀಣ ಬ್ಯಾಂಕ್, ಪ್ರಾದೇಶಿಕ ಕಛೇರಿ, ಮೈಸೂರು ಇವರು ಭಾಗವಹಿಸಿದ್ದರು.
ಇವರು ಸಮಾರಂಭದಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಕೃಷಿ ಪೂರಕ ಚಟುವಟಿಕೆಗಳಲ್ಲಿ ಆಡು ಮತ್ತು ಮೇಕೆ ಸಾಕಾಣಿಕೆಯು ಒಂದು ಬಹುಮುಖ್ಯ ಕಸುಬಾಗಿದ್ದು, ಗ್ರಾಮೀಣ ರೈತರಿಗೆ ತಮ್ಮ ಜೀವನದ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಹಾಸುಹೊಕ್ಕಾಗಿದೆ. ಪಶುಸಂಗೋಪನೆಯಲ್ಲಿ ವಿವಿಧ ಮಜಲುಗಳಿದ್ದು, ಅದರಲ್ಲಿ ಆಡು ಮತ್ತು ಕುರಿ ಸಾಕಾಣಿಕೆಯು ಅತ್ಯಂತ ಲಾಭದಾಯಕವಾದ ಚಟುವಟಿಕೆಯಾಗಿದೆ. ಆಡು ಮತ್ತು ಕುರಿ ಸಾಕಾಣಿಕೆ ಚಟುವಟಿಕೆಯನ್ನು ವ್ಯವಸ್ಥಿತವಾಗಿ ಮಾಡುವುದರಿಂದ ಹೆಚ್ಚು ಆದಾಯವನ್ನು ಪಡೆಯಬಹುದು ಎಂದು ಅಭಿಪ್ರಾಯಪಟ್ಟರು. ಆಡು ಮತ್ತು ಕುರಿ ಸಾಕಾಣಿಕೆ ನಮ್ಮ ಪುರಾತನ ಕಾಲದಿಂದ ನಡೆದುಕೊಂಡು ಬರುತ್ತಿರುವ ಉದ್ಯಮವಾಗಿದ್ದರೂ ಕೂಡ ಇಂದು ಹೊಸ ತಳಿಗಳ ಪರಿಚಯ, ಅವುಗಳ ಸಾಕಾಣಿಕೆ ಬಗ್ಗೆ ವೈಜ್ಞಾನಿಕ ಮಾಹಿತಿಗಳನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದು ಶಿಬಿರಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಾವಾಯ ಕೃಷಿಗೆ ಪೂರಕವಾದ ಕಸುಬು ಇದರಿಂದ ಹೆಚ್ಚಿನ ಲಾಭದ ಅವಕಾಶಗಳನ್ನು ಪಡೆಯಬಹುದು ಎಂದು ತಿಳಿಸಿದರು. ಆಧುನಿಕ ಕೃಷಿ ಪದ್ಧತಿಗೆ / ಯೋಜನೆಗೆ ಪೂರಕವಾಗುವಂತೆ ಕಾರ್ಯನಿರ್ವಹಿಸಿರಿ ಎಂದು ಸಲಹೆ ನೀಡಿದರು. ಆಡು ಮತ್ತು ಕುರಿ ಉದ್ಯಮವನ್ನು ಇಂದಿನ ಯುವಶಕ್ತಿ ಶ್ರದ್ಧೆ ಮತ್ತು ವೈಜ್ಞಾನಿಕವಾಗಿ ಮಾಡುವುದರಿಂದ, ಒಳ್ಳೆಯ ಆದಾಯದೊಂದಿಗೆ ಉತ್ತಮ ಜೀವನ ಮಾಡಬಹುದು ಎಂಬ ಆಶಯದೊಂದಿಗೆ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಶ್ರೀ ವಿ.ಎನ್. ನಾಗೇಶ್, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕರು, ಮೈಸೂರು ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಆಡು ಮತ್ತು ಕುರಿ ಸಾಕಾಣಿಕೆ ಚಟುವಟಿಕೆಯನ್ನು ವೈಜ್ಞಾನಿಕವಾಗಿ ಮಾಡಲು ಬೇಕಾದ ಮಾಹಿತಿಯನ್ನು ನೀಡುವ ಉದ್ದೇಶದಿಂದ ಇಂತಹ ತರಬೇತಿಗಳನ್ನು ಆಯೋಜಿಸಲಾಗುತ್ತದೆ. ಫಲಾನುಭವಿಗಳು ತರಬೇತಿ ಅವಧಿಯಲ್ಲಿ ಸಕ್ರೀಯವಾಗಿ ಪಾಲ್ಗೋಳ್ಳಿ ಎಂದು ಶಿಬಿರಾರ್ಥಿಗಳಿಗೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಶ್ರೀ ಶಾಂತ್‌ವೀರ್, ಡಿಡಿಎಂ, ನಬಾರ್ಡ್, ಮೈಸೂರು, ಮತ್ತು ಶ್ರೀ ಕುಮಾರಸ್ವಾಮಿ, ಆಫೀಸರ್, ಲೀಡ್‌ಬ್ಯಾಂಕ್, ಮೈಸೂರು ಇವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀಮತಿ ಸರಿತಾ ಕೆ.ಎಸ್. ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಮೈಸೂರು ಇವರು ಕಾರ್ಯಕ್ರಮಕ್ಕೆ ಅತಿಥಿಗಳನ್ನು ಮತ್ತು ಶಿಬಿರಾರ್ಥಿಗಳೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು.
ಸಂಸ್ಥೆಯ ಉಪನ್ಯಾಸಕರಾದ ಶ್ರೀ ಆರ್. ಪಾಲ್‌ರಾಜ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಉಪನ್ಯಾಸಕರಾದ ಶ್ರೀಮತಿ ಲತಾಮಣಿಯವರು ವಂದನಾರ್ಪಣೆ ಮಾಡಿದರು.
ಒಟ್ಟು ಕಾರ್ಯಕ್ರಮದಲ್ಲಿ ೭೦ ಜನ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.