Rudset Institute Logo

“ Instead of writing someone else’s account through wage employment after three to five years of collegiate education, it is more meaningful to write one’s own account by embarking upon some self-employment "

- Dr. D. Veerendra Heggade

President, RUDSET Institutes
Veerendra Hegde
Call Us Now: +91 90680 00528

Inauguration of Two Wheeler Mechanic Training Program

ಮೈಸೂರು : ರುಡ್‌ಸೆಟ್ ಸಂಸ್ಥೆಯು ಎನ್.ಆರ್.ಎಲ್.ಎಂ. ಜಿಲ್ಲಾ ಪಂಚಾಯತ್ ಮೈಸೂರು ಇವರ ಪ್ರಾಯೋಜಕತ್ವದಲ್ಲಿ ಉದ್ಯಮಶೀಲತಾಭಿವೃದ್ಧಿ – ದ್ವಿ ಚಕ್ರ ವಾಹನಗಳ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಕಾರ್ಯಕ್ರಮವನ್ನು ೩೦ ದಿನಗಳÀ ಕಾಲಾವಧಿಯವರೆಗೆ ಆಯೋಜಿಸಲಾಗಿದ್ದು, ಈ ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು ದಿನಾಂಕ:೦೧.೦೮.೨೦೨೩ ರ ಸಂಜೆ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಯತೀಶ್, ಸರ್ವಿಸ್ ಇಂಜಿನಿಯರ್, ಸುಜುಕಿ ಶೋ ರೂಂ, ಮೈಸೂರು ಇವರು ಭಾಗವಹಿಸಿದ್ದರು.

ಇವರು ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸುವುದರ ಮೂಲಕ ತರಬೇತಿಗೆ ಚಾಲನೆ ನೀಡಿದರು ಹಾಗೂ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಜಾಗತೀಕರಣ ಜಗತ್ತಿನಲ್ಲಿ ತಂತ್ರಜ್ಞಾನದ ಜೊತೆಗೆ ಆಟೋಮೊಬೈಲ್ ಸರ್ವಿಸಿಂಗ್ ಕ್ಷೇತ್ರ ವಿನೂತನ ರೀತಿಯಲ್ಲಿ ಬದಲಾವಣೆಗೆ ತೆರೆದುಕೊಳ್ಳುತ್ತಾ ಆದುನಿಕತೆಯಲ್ಲಿ ಹೊಸ ಛಾಪನ್ನು ಮೂಡಿಸಿದೆ ಎಂದು ಅಭಿಪ್ರಾಯಪಟ್ಟರು. ಬದಲಾಗುತ್ತಿರುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಿಂದ ವೃತ್ತಿಯಲ್ಲಿ ಆದಾಯ ಹೆಚ್ಚುತ್ತದೆ, ಜೊತೆಗೆ ದುಡಿಯುವ ಕೈಗಳಿಗೆ ಕೆಲಸ ದೊರೆಯುತ್ತದೆ. ಇದನ್ನ ಪ್ರೇರೆಪಿಸುವ ಉದ್ದೇಶದಿಂದ ಪೂರಕವಾಗಿ ರುಡ್‌ಸೆಟ್ ಸಂಸ್ಥೆಯಲ್ಲಿ ದ್ವಿ ಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾರೆ. ಎಲ್ಲಾ ಕೆಲಸಗಳಿಗೂ ತಮ್ಮದೇ ಆದ ಹಿರಿಮೆ ಇರುತ್ತದೆ. ಯಾವ ಕೆಲಸವೂ ಕೀಳಲ್ಲ, ಪ್ರತಿ ಕೆಲಸವನ್ನು ಶ್ರದ್ಧೆ ಮತ್ತು ಪ್ರೀತಿಯಿಂದ ಕೆಲಸ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು, ಕಲಿಕೆಗೆ ಕೊನೆಯಿಲ್ಲ, ಪ್ರತಿ ಸನ್ನಿವೇಶಗಳಿಂದಲೂ ಕೆಲಸದಿಂದಲೂ ಹೊಸದಾಗಿ ಕಲಿಕೆಗೆ ಅವಕಾಶಗಳು ಇರುತ್ತವೆ. ಸ್ವ ಉದ್ಯೋಗದಲ್ಲಿ ಗ್ರಾಹಕರ ಸಂತೃಪ್ತಿ ಉದ್ಯಮಗಳ ಶ್ವಾಸ ಇದ್ದ ಹಾಗೆ. ಸೇವಾ ಮನೋಭಾವದೊಂದಿಗೆ ಗ್ರಾಹಕರಿಗೆ ಸರ್ವಿಸ್ ನೀಡಿರಿ. ಪ್ರಸ್ತುತ ದಿನಗಳಲ್ಲಿ ಬೇಡಿಕೆಯಿರುವಂತಹ ದ್ವಿ ಚಕ್ರ ವಾಹನಗಳ ಸರ್ವಿಸಿಂಗ್ ವೃತ್ತಿಯನ್ನು ಆಯ್ಕೆ ಮಾಡಿ ತರಬೇತಿಗೆ ಬಂದಿರುವುದು ನಿಮ್ಮ ಜೀವನದಲ್ಲಿ ಹೊಸ ತಿರುವನ್ನು ಸೃಷ್ಠಿ ಮಾಡುತ್ತದೆ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಶಿಲ್ಪ, ಗ್ರಾಹಕ ಸಂಬAಧಿ ಆಫೀಸರ್, ಸುಜುಕಿ ಶೋ ರೂಂ, ಮೈಸೂರು ಇವರು ಉಪಸ್ಥಿತರಿದ್ದರು.
ಶ್ರೀಮತಿ ಸರಿತಾ ಕೆ.ಎಸ್. ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಮೈಸೂರು ಇವರು ಕಾರ್ಯಕ್ರಮಕ್ಕೆ ಅತಿಥಿಗಳನ್ನು ಮತ್ತು ಶಿಬಿರಾರ್ಥಿಗಳೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬದುಕಿನಲ್ಲಿ ಯಶಸ್ಸನ್ನು ಸಾಧಿಸಲು ಪ್ರೇರಣೆ ಮತ್ತು ಪೂರಕವಾದ ತಿಳುವಳಿಕೆ ದೊರೆಯಲು ಇಂತಹ ತರಬೇತಿ ಕಾರ್ಯಗಾರಗಳು ನೆರವಾಗುತ್ತವೆ, ಆದ್ದರಿಂದ ತರಬೇತಿಯಲ್ಲಿ ಹೊಸದನ್ನು ಕಲಿಯಲು ಆಸಕ್ತಿವಹಿಸಿ ಎಂದು ಆಶಿಸುತ್ತಾ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಸಂಸ್ಥೆಯ ಉಪನ್ಯಾಸಕರಾದ ಶ್ರೀ ಆರ್. ಪಾಲ್‌ರಾಜ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ಕಾರ್ಯಕ್ರಮದ ಕೊನೆಯಲ್ಲಿ ಸಂಸ್ಥೆಯ ಉಪನ್ಯಾಸಕರಾದ ಶ್ರೀಮತಿ ಲತಾಮಣಿಯವರು ವಂದನಾರ್ಪಣೆ ಮಾಡಿದರು.
ಒಟ್ಟು ಕಾರ್ಯಕ್ರಮದಲ್ಲಿ ೩೫ ಜನ ಶಿಬಿರಾರ್ಥಿಗಳು ಸೇರಿದಂತೆ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.